Home » ಏಕದಿನ ವಿಶ್ವಕಪ್ ನಲ್ಲಿ ಬುಮ್ರಾ: ಬಿಸಿಸಿಐ ಖಡಕ್ ಎಚ್ಚರಿಕೆ ನೀಡಿದ ರವಿ ಶಾಸ್ತ್ರಿ

ಏಕದಿನ ವಿಶ್ವಕಪ್ ನಲ್ಲಿ ಬುಮ್ರಾ: ಬಿಸಿಸಿಐ ಖಡಕ್ ಎಚ್ಚರಿಕೆ ನೀಡಿದ ರವಿ ಶಾಸ್ತ್ರಿ

by Suddi Mane
0 comment

ಏಕದಿನ ವಿಶ್ವಕಪ್‌ ಗೂ ಮೊದಲು ಜಸ್ಪ್ರೀತ್‌ ಬುಮ್ರಾ ಕಣಕ್ಕಿಳಿಯಲು ಸಿದ್ಧರಾಗಿರಬೇಕೆನ್ನುವ ಕಾರಣದಿಂದ ಆತುರವಾಗಿ ಅವರನ್ನು ಆಡಿಸುವ ನಿರ್ಧಾರವನ್ನು ತೆಗೆದುಕೊಳ್ಳಬೇಡಿ ಎಂಬುದಾಗಿ ಟೀಂ ಇಂಡಿಯಾ ಮಾಜಿ ಕೋಚ್‌ ರವಿಶಾಸ್ತ್ರಿ ಅವರು ಎಚ್ಚರಿಕೆಯನ್ನು ನೀಡಿದ್ದಾರೆ. ಟೀಂ ಇಂಡಿಯಾದ ವೇಗದ ಬೌಲರ್ ಎನಿಸಿಕೊಂಡಿರುವ ಜಸ್ಪ್ರೀತ ಬೂಮ್ರಾ ಕಳೆದ ವರ್ಷ ಸೆಪ್ಟೆಂಬರ್ ತಿಂಗಳ ನಂತರದಲ್ಲಿ ಗಾಯದ ಸಮಸ್ಯೆಯ ಕಾರಣದಿಂದಾಗಿ ಕ್ರಿಕೆಟ್‌ ನಿಂದ ಅಂತರವನ್ನು ಕಾಯ್ದುಕೊಂಡಿದ್ದಾರೆ.

ಇದರಿಂದಾಗಿ ಅವರು 2022 ರ T20 ಏಷ್ಯಾಕಪ್‌, T20 ವಿಶ್ವಕಪ್‌ ಹಾಗೂ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ನ ಫೈನಲ್‌ ಪಂದ್ಯ ಸೇರಿದಂತೆ ಪ್ರಮುಖ ಟೂರ್ನಿಗಳಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡಿದ್ದರು. ಈಗ ಈ ವರ್ಷಾಂತ್ಯದಲ್ಲಿ ಭಾರತದಲ್ಲೇ ಏಕದಿನ ವಿಶ್ವಕಪ್‌ ನಡೆಯಲಿದ್ದು ಈ ವೇಳೆ ಬಿಸಿಸಿಐ ಬುಮ್ರಾ ಅವರನ್ನು ಕಣಕ್ಕೆ ಇಳಿಸಲು ಬೇಕಾದ ತಯಾರಿಯನ್ನು ನಡೆಸುತ್ತಿದೆ ಎನ್ನಲಾಗಿದ್ದು, ಇದಕ್ಕೆ ರವಿಶಾಸ್ತ್ರಿ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಬಿಸಿಸಿಐ ಬುಮ್ರಾ ಈಗ ಬಹುತೇಕ ಫಿಟ್ ಆಗಿದ್ದಾರೆ ಮತ್ತು ಅವರು ವಿಶ್ವಕಪ್‌ ಗೂ ಮುನ್ನ ಐರ್ಲೆಂಡ್‌ ವಿರುದ್ಧದ ಸರಣಿ ಮೂಲಕ ತಂಡಕ್ಕೆ ಮರಳುವಂತೆ ಮಾಡುವ ಪ್ರಯತ್ನದಲ್ಲಿದ್ದು, ಇಂತಹುದೊಂದು ಬೆಳವಣಿಗೆಯನ್ನು ಕಂಡು ಇದರ ಬಗ್ಗೆ ರವಿ ಶಾಸ್ತ್ರಿ ಟೀಂ ಇಂಡಿಯಾಗೆ ತಮ್ಮ ಕಡೆಯಿಂದ ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ. ರವಿಶಾಸ್ತ್ರಿ ಅವರು ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಏಕದಿನ ವಿಶ್ವಕಪ್‌ ಗೆ ಮೊದಲೇ ಬುಮ್ರಾ ಅವರನ್ನು ಆಡಿಸುವಂತಹ ಒಂದು ಆತುರದ ನಿರ್ಧಾರ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.

You may also like

Leave a Comment

ಸಮಗ್ರ ಸುದ್ದಿಗಳ ಆಗರ
ವಿಶೇಷ ಮಾಹಿತಿಗಳ ಸಂಚಾರ
ಸುದ್ದಿಮನೆ ಇದು ತಾಜಾ ಸಮಾಚಾರ

Edtior's Picks

Latest Articles

&copy 2023 by Suddi Mane. All rights reserved.

This website uses cookies to improve your experience. We'll assume you're ok with this, but you can opt-out if you wish. Accept Read More

Adblock Detected

Please support us by disabling your AdBlocker extension from your browsers for our website.
Designed & developed by Crisant Technologies