ಗೃಹ ಜ್ಯೋತಿ ಯೋಜನೆಗೆ ಬೇಗನೆ ಅರ್ಜಿ ಸಲ್ಲಿಸಿ: ಈ ದಿನಾಂಕ ಮುಗಿದರೆ ನಿಮಗೆ ಉಚಿತ ವಿದ್ಯುತ್ ಸಿಗೋದಿಲ್ಲ

ಕಾಂಗ್ರೆಸ್ ಸರ್ಕಾರವು ರಾಜ್ಯದ ಜನತೆಗೆ ನೀಡಿರುವ ಉಚಿತಗಳಲ್ಲಿ ಒಂದಾಗಿರುವ ಗೃಹ ಜ್ಯೋತಿ ಯೋಜನೆಯು ಜುಲೈ 01ರಿಂದ ಅಧಿಕೃತವಾಗಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆಯು ಜುಲೈ 25 ರೊಳಗೆ ಈ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಕೆ ಮಾಡಲು ಸೂಚನೆಯನ್ನು ನೀಡಿದೆ. ಒಂದು ವೇಳೆ ಈ ಯೋಜನೆಯ ಅಡಿಯಲ್ಲಿ ಉಚಿತ ಪಡೆಯಲು ಅರ್ಜಿ ಸಲ್ಲಿಸುವುದು ತಡವಾದರೆ 200 ಯುನಿಟ್ ಉಚಿತ ವಿದ್ಯುತ್ ಸಿಗುವುದಿಲ್ಲ ಎಂದು ತಿಳಿಸಲಾಗಿದೆ.

ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಮಾತ್ರವೇ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ ಎಂದು ಸಹಾ ಇಂಧನ ಇಲಾಖೆಯು ಮಾಹಿತಿಯನ್ನು ನೀಡಿದೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರದ ಮಹತ್ವದ ಯೋಜನೆಯಾಗಿರುವ ಗೃಹಜ್ಯೋತಿ ಸ್ಕೀಮ್ ಗೆ ಅರ್ಜಿ ಸಲ್ಲಿಕೆಯ ಕೆಲಸವು ಬಹಳ ಭರದಿಂದ ನಡೆಯುತ್ತಿದೆ. ಇದೇ ವೇಳೆ ಗೃಹಜ್ಯೋತಿ 200 ಯುನಿಟ್ ಕೌಂಟಿಂಗ್ ಜುಲೈ 01ರಿಂದಲೇ ಚಾಲನೆ ದೊರೆತಿದೆ.

ಗೃಹಜ್ಯೋತಿ ಯೋಜನೆಯ ಲಾಭವನ್ನು ಪಡೆಯಲು ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಸಹಾ ಉಚಿತ ವಿದ್ಯುತ್ ಸೌಲಭ್ಯ ಲಭ್ಯವಾಗಲಿದೆ. ಜುಲೈ ತಿಂಗಳ ಬಿಲ್‌ ಬರುವ ಮುನ್ನವೇ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ಇಲ್ಲದೇ ಹೋದಲ್ಲಿ ಕರೆಂಟ್‌ ಗೆ ಬಿಲ್ ಹಣವನ್ನು ಕಡ್ಡಾಯವಾಗಿ ಪಾವತಿಸಬೇಕಾಗಿದೆ. ಯಾವುದೇ ಕಾರಣದಿಂದ ಗೃಹಜ್ಯೋತಿಗೆ ಅರ್ಜಿ ಹಾಕುವುದು ತಡವಾದ್ರೆ 200 ಯುನಿಟ್ ಉಚಿತ ವಿದ್ಯುತ್ ಸಿಗುವುದಿಲ್ಲ.

Related posts

ಭಾರತದ 2 ನೇ ಅತಿದೊಡ್ಡ ಸಂಯೋಜಿತ ಉಕ್ಕು ಸ್ಥಾವರವಾಗಿದ್ದು, ಇದು 3,800 ಕ್ಕೂ ಹೆಚ್ಚು ನೇರ ಉದ್ಯೋಗ ನೀಡುವ ಕಾರ್ಖಾನೆ ಕರ್ನಾಟಕದ ಕೊಪ್ಪಳದಲ್ಲಿ ಸ್ಥಾಪನೆ.

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

This website uses cookies to improve your experience. We'll assume you're ok with this, but you can opt-out if you wish. Read More